ಪ್ರಮೋದ್ ಜಯ ನಿರ್ದೇಶನದ ‘ದಿಲ್ ಖುಷ್’ ಚಿತ್ರದ ಅಂತಿಮ ಹಂತದ ಚಿತ್ರೀಕರಣ ಕೊಡಗಿನಲ್ಲಿ ಶೀಘ್ರದಲ್ಲಿ ಆರಂಭವಾಗಲಿದೆ.
ರೊಮ್ಯಾಂಟಿಕ್ ಕಾಮಿಡಿ ಜೊತೆಗೆ ಕೌಟುಂಬಿಕ ಕಥಾಹಂದರ ಹೊಂದಿರುವ “ದಿಲ್ ಖುಷ್” ಚಿತ್ರದ ದ್ವಿತೀಯ ಹಂತದ ಚಿತ್ರೀಕರಣ ಕೊಡಗಿನ ಸೋಮವಾರಪೇಟೆ ಹಾಗೂ ಶನಿವಾರಸಂತೆಯಲ್ಲಿ ಒಂಭತ್ತು ದಿನಗಳ ಕಾಲ ನಡೆದಿದೆ.
ಈಗಾಗಲೇ ಚಿತ್ರದ ಮಾತಿನ ಭಾಗ ಹಾಗೂ ಸಾಹಸ ಸನ್ನಿವೇಶದ ಚಿತ್ರದ ಚಿತ್ರೀಕರಣ ನಡೆದಿದೆ.


ಸಾಹಸದ ದೃಶ್ಯವನ್ನು ಅಶೋಕ್ ಅವರು ಸಂಯೋಜಿಸಿದ್ದು, ಸಾಹಸ ಸನ್ನಿವೇಶ ಕೆಸರುಗದ್ದೆಯಲ್ಲಿ ಚಿತ್ರೀಕರಣಗೊಂಡಿದೆ.
ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ “ದಿಲ್ ಖುಷ್” ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಈ ಹಿಂದೆ ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ.
ಐದು ಸುಮಧುರ ಹಾಡುಗಳಿದ್ದು, ಪ್ರಸಾದ್ ಕೆ ಶೆಟ್ಟಿ ಅವರ ಸಂಗೀತ ನಿರ್ದೇಶನವಿದೆ. ನಿವಾಸ್ ನಾರಾಯಣ್ ಛಾಯಾಗ್ರಹಣ, ಜ್ಞಾನೇಶ್ ಬಿ ಮಠದ್ ಸಂಕಲನ ಹಾಗೂ ವಿಕ್ರಮ್, ಅಶೋಕ್ ಅವರ ಸಾಹಸ ನಿರ್ದೇಶನವಿದೆ.
ಚಿತ್ರಕ್ಕೆ ರಂಜಿತ್ ಅವರು ಮೊದಲ ಬಾರಿ ನಾಯಕನಾಗಿ ಕಾಣಿಸಿಕೊಳ್ಳಲಿದ್ದಾರೆ.
ಸ್ಪಂದನ ಸೋಮಣ್ಣ ನಾಯಕಿಯಾಗಿ ಕಾಣಿಸಿಕೊಳ್ಳಲಿದ್ದಾರೆ.
ರಂಗಾಯಣ ರಘು, ಧರ್ಮಣ್ಣ ಕಡೂರು, ರವಿ ಭಟ್, ಅರುಣ ಬಾಲರಾಜ್, ರಘು ರಾಮನಕೊಪ್ಪ, ಸೂರ್ಯ ಪ್ರವೀಣ್, ಮಧುಸೂದನ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

