HomeNewsನೆರವೇರಿತು ಅಭಿಷೇಕ್ - ಸಪ್ತಮಿ ಗೌಡ 'ಕಾಳಿ' ಮುಹೂರ್ತ: ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭ

ನೆರವೇರಿತು ಅಭಿಷೇಕ್ – ಸಪ್ತಮಿ ಗೌಡ ‘ಕಾಳಿ’ ಮುಹೂರ್ತ: ಮುಂದಿನ ವರ್ಷದಿಂದ ಚಿತ್ರೀಕರಣ ಆರಂಭ

ಜೂ.ರೆಬೆಲ್ ಸ್ಟಾರ್ ಅಭಿಷೇಕ್ – ಕೃಷ್ಣ ಕಾಂಬಿನೇಷನ್ ನ ‘ಕಾಳಿ’ ಚಿತ್ರದ ಮುಹೂರ್ತ
ಶ್ರೀ ಬಂಡಿ ಮಂಕಾಳಮ್ಮ ದೇವಸ್ಥಾನದಲ್ಲಿ ನೆರವೇರಿತು.

‘ಕಾಳಿ’ ಚಿತ್ರವನ್ನು ಕೃಷ್ಣ ಅವರ ಪತ್ನಿ ಸ್ವಪ್ನಾ ಕೃಷ್ಣ ತಮ್ಮ RRR ಮೋಷನ್ ಪಿಕ್ಚರ್ಸ್ ಸಂಸ್ಥೆಯಡಿ ನಿರ್ಮಾಣ ಮಾಡುತ್ತಿದ್ದಾರೆ.
ಇದು ಈ ಸಂಸ್ಥೆಯ ಮೂರನೆಯ ಚಿತ್ರವಾಗಿದೆ.

‘ಪೈಲ್ವಾನ್’ ಚಿತ್ರದ ಮ‌ೂಲಕ ‌ನಿರ್ಮಾಣ ಕ್ಷೇತ್ರಕ್ಕೆ ಇಳಿದಿ ಆರ್ ಆರ್ ಆರ್ ಮೋಷನ್ ಪಿಕ್ಚರ್ಸ್ ಆ ನಂತರ ಪುನೀತ್ ರಾಜ್ಕುಮಾರ್ ಅಭಿನಯದಲ್ಲಿ ಹೊಸ ಚಿತ್ರವೊಂದನ್ನು ಘೋಷಿಸಿತ್ತು. ಆದರೆ, ಪುನೀತ್ ಅವರ ಅಕಾಲಿಕ ನಿಧನದಿಂದಾಗಿ, ಸಂಸ್ಥೆಯ ಎರಡನೇ ನಿರ್ಮಾಣವನ್ನು ಅವರಿಗೆ ಅರ್ಪಿಸಿದೆ.

ಸಿನಿಮಾವನ್ನು ‌ನಿರ್ಮಿಸುವ ಮುನ್ನ 8 ವರ್ಷಗಳಿಂದ ಕನ್ನಡದ ಕಿರುತೆರೆಯಲ್ಲಿ ‘ಜೀ ಕನ್ನಡದ’ ಅನೇಕ ಧಾರಾವಾಹಿಗಳನ್ನು ನಿರ್ಮಿಸಿದ್ದಾರೆ.

ಸದ್ಯ ಪ್ರಸಾರವಾಗುತ್ತಿರುವ ‘ಸತ್ಯ’ ಮತ್ತು ‘ಸೀತಾರಾಮ’ ಧಾರಾವಾಹಿಗಳಿಗೆ ಬಂಡವಾಳ ಹಾಕಿದ್ದಾರೆ.

‘ಕಾಳಿ’ ಚಿತ್ರದಲ್ಲಿ ಅಂಬರೀಶ್ ಮತ್ತು ಸುಮಲತಾ ಅವರ ಪುತ್ರ ಅಭಿಷೇಕ್ ಅಂಬರೀಶ್ ನಾಯಕನಾಗಿ ನಟಿಸುತ್ತಿದ್ದು, ಇದು ಅವರ ಅಭಿನಯದ ಮೂರನೆಯ ಚಿತ್ರವಾಗಿದೆ. ‘ಕಾಂತಾರ’ ಖ್ಯಾತಿಯ ಸಪ್ತಮಿ ಗೌಡ ಕಾಳಿ ಚಿತ್ರದ ನಾಯಕಿಯಾಗಿ ನಟಿಸುತ್ತಿದ್ದಾರೆ.

ಈ ಹಿಂದೆ ಕೃಷ್ಣ ನಿರ್ದೇಶನದ ‘ಹೆಬ್ಬುಲಿ’ ಮತ್ತು ‘ಪೈಲ್ವಾನ್’ ಚಿತ್ರಗಳಿಗೆ ಛಾಯಾಗ್ರಾಹಕರಾಗಿದ್ದ ಕರುಣಾಕರ್, ಇಲ್ಲೂ ಛಾಯಾಗ್ರಾಹಕರಾಗಿ ಕೆಲಸ ಮಾಡುತ್ತಿದ್ದಾರೆ. ಇನ್ನು, ‘ಗೋಧಿ ಬಣ್ಣ ಸಾಧಾರಣ ಮೈಕಟ್ಟು’, ‘ಟಗರು’ ‘ಸಲಗ’ ಮುಂತಾದ ಚಿತ್ರಗಳಿಗೆ ಸಂಗೀತ ಸಂಯೋಜಿಸಿರುವ ಚರಣ್ ರಾಜ್ ಈ ಚಿತ್ರದ ಸಂಗೀತ ನಿರ್ದೇಶಕರು.

ದೀಪು ಎಸ್ ಕುಮಾರ್ ಸಂಕಲನ ಮತ್ತು ‘ಕೆಜಿಎಫ್’ ಖ್ಯಾತಿಯ ಚಂದ್ರಮೌಳಿ ಈ ಚಿತ್ರಕ್ಕೆ ಸಂಭಾಷಣೆ ‘ಕಾಳಿ’ಗೆ ಸಂಭಾಷಣೆ ಬರೆಯಲಿದ್ದಾರೆ.

‘ಕಾಳಿ’ ಚಿತ್ರದಲ್ಲಿ ಅಭಿನಯಿಸುವ ಕಲಾವಿದರಿಗಾಗಿ ಡಿಸೆಂಬರ್ನಲ್ಲಿ ವಿಶೇಷ ಕಾರ್ಯಾಗಾರವನ್ನು ಆಯೋಜಿಸಲಾಗಿದ್ದು, 2023ರ ಜನವರಿಯಿಂದ ಚಿತ್ರೀಕರಣ ಪ್ರಾರಂಭವಾಗಲಿದೆ.

RELATED ARTICLES

Most Popular

Share via
Copy link
Powered by Social Snap