ಗೌತಮ್ ವಿಮಲ್ ಅವರ ‘ಕೈಮರ’ ಚಿತ್ರದ ಮುಹೂರ್ತ ವಿಜಯದಶಮಿ ಹಬ್ಬದಂದು ಗಣ್ಯರ ಸಮ್ಮುಖದಲ್ಲಿ ನೆರವೇರಿತು.
ಚಿತ್ರದಲ್ಲಿ ಪ್ರಮುಖ ಪಾತ್ರವನ್ನು ಮಾಡಿರುವ ಪ್ರಿಯಾಂಕ ಉಪೇಂದ್ರ ಅವರು ಮಾತಾನಾಡಿ, ನಾನು ಇದುವರೆಗೆ ಮಾತಾಡ ಪಾತ್ರ ‘ಕೈಮರ’ದಲ್ಲಿದೆ. ಛಾಯಸಿಂಗ್ ಅವರೊಂದಿಗೆ ನಟಿಸಿರುವುದು ಖುಷಿಯಾಗಿದೆ. ಕನ್ನಡದ ಕೆಜಿಎಫ್, ಕಾಂತಾರ ಸಿನಿಮಾ ಹೇಗೆ ಭಿನ್ನವಾಗಿ ಪ್ರೇಕ್ಷಕರನ್ನು ಸೆಳೆಯಿತ್ತೋ, ಹಾಗೆಯೇ ನಮ್ಮ ‘ಕೈಮರ’ ಕೂಡ ವಿಭಿನ್ನ ಕಥಾಹಂದರವನ್ನು ಹೊಂದಿದೆ. ಖಂಡಿತ ಚಿತ್ರ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತನ್ನ ಚೊಚ್ಚಲ ನಿರ್ದೇಶನದ ಚಿತ್ರದ ಬಗತ ಮಾತಾನಾಡಿದ ಗೌತಮ್ ವಿಮಲ್, ಇದೊಂದು ಸೈಕಾಲಜಿಕಲ್ ಕಥೆವುಳ್ಳ ಚಿತ್ರ, ಕಳೆದ ಮೂರು ವರ್ಷದಿಂದ ಇದರ ಕಥೆಯ ಕುರಿತು ತಯಾರಿ ನಡೆಯುತ್ತಿತ್ತು. ಕೋವಿಡ್ ಕಾರಣದಿಂದ ಚಿತ್ರದ ಆರಂಭ ಕಷ್ಟವಾಯಿತು. ಇದೇ ಅಕ್ಟೋಬರ್ 10 ರಿಂದ ಚಿತ್ರವನ್ನುಬೆಂಗಳೂರು, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಸಲು ಪ್ಲ್ಯಾನ್ ಮಾಡಿಕೊಂಡಿದ್ದೇವೆ ಎಂದರು.


ಇದೊಂದು ಹಾರಾರ್ ಸೈಕಲಾಜಿಕಲ್ ಕಥಾಹಂದರ ಹೊಂದಿರುವ ಚಿತ್ರ. ನನ್ನ ನಿರ್ದೇಶನದ ಮೊದಲ ಚಿತ್ರ ಸಹ. ಕಳೆದ ಮೂರುವರ್ಷಗಳಿಂದ “ಕೈಮರ” ಕುರಿತಾದ ಕೆಲಸಗಳು ನಡೆಯುತ್ತಿದ್ದವು. ಕೊರೋನ ಕಾರಣದಿಂದ ಚಿತ್ರೀಕರಣ ಆರಂಭವಾಗುವು ಸ್ವಲ್ಪ ತಡವಾಯಿತು. ಈಗ ದಸರಾದ ಶುಭದಿನದಲ್ಲಿ ಮುಹೂರ್ತ ನಡೆದಿದೆ. ಅಕ್ಟೋಬರ್ ಹತ್ತರಿಂದ ಚಿತ್ರೀಕರಣ ಆರಂಭವಾಗಲಿದೆ. ಬೆಂಗಳೂರು, ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ ಎಂದರು ನಿರ್ದೇಶನ ಗೌತಮ್ ವಿಮಲ್.


ನಿರ್ಮಾಪಕ ಮಾತಾನಾಡಿ, ವಿ.ಮತ್ತಿಯಳಗನ್ ಈ ಚಿತ್ರ ಉಳಿದ ಚಿತ್ರಗಳಿಗಿಂತ ಭಿನ್ನವಾಗಿರಲಿದೆ. ಚಿತ್ರಕ್ಕಾಗಿ ನಿರ್ದೇಶಕ ಗೌತಮ್ ಉತ್ತಮ ಕಥೆ ಬರೆದಿದ್ದಾರೆ. ಗುರುಕಿರಣ್ ಸಂಗೀತ ನಿರ್ದೇಶನ, ಮಣಿಕಂಠನ್ ಛಾಯಾಗ್ರಹಣ, ಮೋಹನ್ ಬಿ ಕೆರೆ ಕಲಾ ನಿರ್ದೇಶನ ಹಾಗೂ ವಿನೋದ್ ಅವರ ಸಾಹಸ ನಿರ್ದೇಶನ “ಕೈಮರ” ದಲ್ಲಿರಲಿದೆ. ಪ್ರಿಯಾಂಕ ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ಮುಖ್ಯಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ. ನಾನು ಹಾಗೂ ವಿನಯ್ ಗೌಡ ಅವರು ಈ ಚಿತ್ರದಲ್ಲಿ ನಟಿಸುತ್ತಿದ್ದೇವೆ. “ಕೈಮರ” 2023 ರ ಉತ್ತಮ ಚಿತ್ರವಾಗಿ ಪ್ರೇಕ್ಷಕರ ಮೆಚ್ಚುಗೆಗೆ ಪಾತ್ರವಾಗಲಿದೆ ಎಂದರು.
ಉಪೇಂದ್ರ, ಪ್ರಿಯಾಮಣಿ, ಛಾಯಾಸಿಂಗ್ ವಿನಯ್ ಗೌಡ, ನಿರ್ಮಾಪಕ ವಿ. ಮತ್ತಿಯಳಗನ್ ಮುಖ್ಯಪಾತ್ರಗಳಲ್ಲಿ ನಟಿಸುತ್ತಿದ್ದಾರೆ.

