HomeExclusive Newsಸ್ವತಂತ್ರ ಪೂರ್ವದ ಕಥೆಯನ್ನಿಟ್ಟುಕೊಂಡು ಬರುತ್ತಿದೆ "ಶ್ಯಾನುಭೋಗರ ಮಗಳು"

ಸ್ವತಂತ್ರ ಪೂರ್ವದ ಕಥೆಯನ್ನಿಟ್ಟುಕೊಂಡು ಬರುತ್ತಿದೆ “ಶ್ಯಾನುಭೋಗರ ಮಗಳು”

ಚಂದನವನದಲ್ಲಿ ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿ ಸೈ ಎನ್ನಿಸಿಕೊಂಡ ಕೋಡ್ಲು ರಾಮಕೃಷ್ಣ ಈಗ ಸ್ವತಂತ್ರ ಪೂರ್ವದ ಕಥೆಯ ಮೂಲಕ
“ಶ್ಯಾನುಭೋಗರ ಮಗಳು” ಎಂಬ ಸಿನಿಮಾವನ್ನು ಮಾಡುವ ತಯಾರಿಯಲ್ಲಿದ್ದಾರೆ.

ಈ‌ ಚಿತ್ರ ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಮೇಲೆ‌ ಆಧಾರಿತವಾಗಿದೆ.



“ಶ್ಯಾನುಭೋಗರ ಮಗಳಾಗಿ” ರಾಗಿಣಿ ಪ್ರಜ್ವಲ್ ಕಾಣಿಸಿಕೊಳ್ಳಲಿದ್ದು, ಇದರೊಂದಿಗೆ ಮೇಘಶ್ರೀ,ನಿರಂಜನ್ ಕುಮಾರ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ‌ಶಂಕರ್ ಅಶ್ವತ್ಥ್ , ನೀನಾಸಂ ಅಶ್ವತ್ಥ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.
ಈ ಚಿತ್ರದಲ್ಲಿ ಟಿಪ್ಪಸುಲ್ತಾನ್ ಪ್ರಮುಖ ಪಾತ್ರವಾಗಿದೆ.

ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ. ಭುವನ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.


ಸೆಪ್ಟೆಂಬರ್ ಕೊನೆಯ ವಾರದಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

RELATED ARTICLES

Most Popular

Share via
Copy link
Powered by Social Snap