ಚಂದನವನದಲ್ಲಿ ಕಾದಂಬರಿ ಆಧಾರಿತ ಚಿತ್ರಗಳನ್ನು ನಿರ್ದೇಶಿಸಿ ಸೈ ಎನ್ನಿಸಿಕೊಂಡ ಕೋಡ್ಲು ರಾಮಕೃಷ್ಣ ಈಗ ಸ್ವತಂತ್ರ ಪೂರ್ವದ ಕಥೆಯ ಮೂಲಕ
“ಶ್ಯಾನುಭೋಗರ ಮಗಳು” ಎಂಬ ಸಿನಿಮಾವನ್ನು ಮಾಡುವ ತಯಾರಿಯಲ್ಲಿದ್ದಾರೆ.
ಈ ಚಿತ್ರ ಶ್ರೀಮತಿ ಭಾಗ್ಯ ಕೃಷ್ಣಮೂರ್ತಿ ಅವರ ಕಾದಂಬರಿ ಮೇಲೆ ಆಧಾರಿತವಾಗಿದೆ.
“ಶ್ಯಾನುಭೋಗರ ಮಗಳಾಗಿ” ರಾಗಿಣಿ ಪ್ರಜ್ವಲ್ ಕಾಣಿಸಿಕೊಳ್ಳಲಿದ್ದು, ಇದರೊಂದಿಗೆ ಮೇಘಶ್ರೀ,ನಿರಂಜನ್ ಕುಮಾರ್, ರಮೇಶ್ ಭಟ್, ಟೆನ್ನಿಸ್ ಕೃಷ್ಣ, ಶಂಕರ್ ಅಶ್ವತ್ಥ್ , ನೀನಾಸಂ ಅಶ್ವತ್ಥ್ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸಲಿದ್ದಾರೆ.
ಈ ಚಿತ್ರದಲ್ಲಿ ಟಿಪ್ಪಸುಲ್ತಾನ್ ಪ್ರಮುಖ ಪಾತ್ರವಾಗಿದೆ.
ಬಿ.ಎ.ಮಧು ಚಿತ್ರಕಥೆ ಹಾಗೂ ಸಂಭಾಷಣೆ ಬರೆಯುತ್ತಿರುವ ಈ ಚಿತ್ರಕ್ಕೆ ಜೈ ಆನಂದ್ ಛಾಯಾಗ್ರಹಣ, ಶಮಿತಾ ಮಲ್ನಾಡ್ ಸಂಗೀತ ನಿರ್ದೇಶನ ಹಾಗೂ ವಸಂತ್ ರಾವ್ ಕುಲಕರ್ಣಿ ಅವರ ಕಲಾ ನಿರ್ದೇಶನವಿದೆ. ಭುವನ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗುತ್ತಿದೆ.
ಸೆಪ್ಟೆಂಬರ್ ಕೊನೆಯ ವಾರದಿಂದ ಮೈಸೂರು, ಶ್ರೀರಂಗಪಟ್ಟಣ, ಮೇಲುಕೋಟೆ ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.

