HomeExclusive Newsನೈಜ ಘಟನೆಯ "ತನುಜಾ" ಮೋಷನ್ ಪಿಕ್ಚರ್ ರಿಲೀಸ್: ಗಣ್ಯರು ಭಾಗಿ

ನೈಜ ಘಟನೆಯ “ತನುಜಾ” ಮೋಷನ್ ಪಿಕ್ಚರ್ ರಿಲೀಸ್: ಗಣ್ಯರು ಭಾಗಿ

ನೈಜಘಟನೆ ಆಧಾರಿತ “ತನುಜಾ” ಚಿತ್ರದ ಮೋಷನ್ ಪೋಸ್ಟರ್ ಅನಾವರಣ.


“ತನುಜಾ” ಎನ್ನುವ ನೈಜ‌ ಘಟನೆಯ ಚಿತ್ರದ ಮೋಷನ್‌ ಪಿಕ್ಚರ್ ಬಿಡುಗಡೆ ಇತ್ತೀಚೆಗೆ ನೆರವೇರಿತು.


2020 ರಲ್ಲಿ ಕೋವಿಡ್ ಸಂದರ್ಭದಲ್ಲಿ
ಆಗಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್, ವಿಶ್ವೇಶ್ವರ್ ಭಟ್ ಹಾಗೂ ಪ್ರದೀಪ್ ಈಶ್ವರ್ ಅವರ ಸಹಾಯದಿಂದ ಶಿವಮೊಗ್ಗ ಜಿಲ್ಲೆಯ ಕುಗ್ರಾಮದ ಹುಡುಗಿ ತನುಜಾ ಬೆಂಗಳೂರಿಗೆ ಬಂದು ನೀಟ್ ಪರೀಕ್ಷೆ ಬರೆದಿದ್ದಳು.




ಈ ನೈಜ ಘಟನೆತೇ “ತನುಜಾ” ಚಿತ್ರದ ಕಥೆ. ಹರೀಶ್ ಎಂ.ಡಿ ಹಳ್ಳಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ.


ಪತ್ರಕರ್ತ ವಿಶ್ವೇಶ್ವರ ಭಟ್ ಮೋಷನ್ ಪಿಕ್ಚರ್ ರಿಲೀಸ್ ಮಾಡಿದರು.‌


ಆ ಬಳಿಕ ಮಾತಾನಾಡಿದ ಅವರು, ನಾನು ಮೊದಲು ಪರಿಶ್ರಮ ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್ ಅವರನ್ನು ಅಭಿನಂದಿಸುತ್ತೇನೆ. ಅವರಿಂದಲ್ಲೇ ತನುಜಾ ಪರೀಕ್ಷೆ ಬರೆಯಲು ಸಾಧ್ಯವಾಗಿದ್ದು‌. ನನ್ನ ಅಂಕಣ ಓದಿ‌ ಕೆಲವರು ಚಿತ್ರ ಮಾಡುವುದಾಗಿ ಹೇಳಿದರು. ಅದರಲ್ಲಿ ಹರೀಶ್ ಕೂಡ ಒಬ್ಬರು. ಅವರ ಸಿನಿಮಾ ಮೇಲಿನ ಆಸಕ್ತಿ ಹಾಗೂ ಶ್ರದ್ದೆ ನಿಜಕ್ಕೂ ನನಗೆ ಆಶ್ಚರ್ಯ ಉಂಟು ಮಾಡಿತು ಚಿತ್ರ ಮಾಡುವಲ್ಲಿ ಹರೀಶ್ ರವರು ಸಾಕಷ್ಟು ಪರಿಶ್ರಮವನ್ನು ಪಟ್ಟಿದ್ದಾರೆ ಬಹಳ ಕನಸುಗಳನ್ನು ಭರವಸೆ ಇಟ್ಟುಕೊಂಡಿರುವ ನಿರ್ದೇಶಕ ತನುಜಾ ಚಿತ್ರವನ್ನು ಅವರು ಚೆನ್ನಾಗಿ ನಿರ್ದೇಶಿಸಿದ್ದಾರೆ. ನಾನು ಕೂಡ ಅಭಿನಯಿಸಿದ್ದೇನೆ. ಆಗಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಹಾಗೂ ಸಚಿವ ಸುಧಾಕರ್ ಅವರು ಸಹ ತನುಜಾ ಪರೀಕ್ಷೆ ಬರೆಯಲು ಮಾಡಿದ್ದ ಉಪಕಾರ ಸ್ಮರಣೀಯ. ಈ ಚಿತ್ರದ ಬಗ್ಗೆ ಪ್ರಧಾನಿ ಮೋದಿಯವರ ಗಮನಕ್ಕೆ ತಂದಿದ್ದು, ಚಿತ್ರದ ಕೊನೆಯಲ್ಲಿ ಅವರು ಕೆಲವು ಸೆಕೆಂಡ್ ಗಳ ಕಾಲ ಅವರು ಮಾತನಾಡುವ ಸಾಧ್ಯತೆ ಇದೆ ಎಂದು ಹೇಳಿದರು.


ನಿರ್ದೇಶಕ ಹರೀಶ್ ಎಂ.ಡಿ ಹಳ್ಳಿ ಮಾತಾನಾಡಿ, ವಿಶ್ವೇಶ್ವರ ಭಟ್ ಅವರ ಅಂಕಣದಿಂದ ಪ್ರೇರಿತನಾದ ನಾನು, ಈ ಚಿತ್ರದ ನಿರ್ದೇಶನಕ್ಕೆ ಮುಂದಾದೆ. ನನ್ನ ಹಲವು ಸ್ನೇಹಿತರು ಬಂಡವಾಳ ಹೂಡಿದರು. ಒಂದು ದಿನದಲ್ಲಿ ನಡೆಯುವ ಕಥೆಯಿದು. ಶಿವಮೊಗ್ಗ, ಬೆಂಗಳೂರಿನಲ್ಲಿ ಚಿತ್ರೀಕರಣ ನಡೆದಿದೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಸಚಿವ ಸುಧಾಕರ್, ಪತ್ರಕರ್ತ ವಿಶ್ವೇಶ್ವರ ಭಟ್ ಮುಂತಾದ ಗಣ್ಯರು ವಿಶೇಷ ಪಾತ್ರದಲ್ಲಿ ಅಭಿನಯಿಸಿದ್ದಾರೆ. ಸೆಪ್ಟೆಂಬರ್ ಅಥವಾ ಅಕ್ಟೋಬರ್ ತಿಂಗಳಲ್ಲಿ ಚಿತ್ರ ತೆರೆಗೆ ಬರಲಿದೆ ಎಂದರು.




ತನುಜಾ ಪಾತ್ರದಲ್ಲಿ ಕಾಣಿಸಿಕೊಂಡಿರುವ ಸಪ್ತ ಪಾವೂರು ಮಾತಾನಾಡಿ, ನಾನು ಈ ಸಿನಿಮಾ ಮಾಡದೆ ಹೋಗಿದ್ದರೆ, ನನಗೆ ತುಂಬಾ ನಷ್ಟವಾಗುತ್ತಿತ್ತು. ಈ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ನನಗೆ ಖುಷಿಯಾಗಿದೆ ಎಂದರು.


ನೀಟ್ ಅಕಾಡೆಮಿಯ ಪ್ರದೀಪ್ ಈಶ್ವರ್. ಆಗಿನ ಮುಖ್ಯಮಂತ್ರಿಗಳಿಗೆ ವಿಶೇಷಾಧಿಕಾರಿಯಾಗಿದ್ದ ಡಾ ಕೆ.ಆರ್ ಕಾರ್ತಿಕ್ ತಮ್ಮ ಅನುಭವ ಹಂಚಿಕೊಂಡರು.


ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷ ಭಾ.ಮ ಹರೀಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷ ಉಮೇಶ್ ಬಣಕಾರ್ ಇಂತಹ ಒಳ್ಳೆಯ ಪ್ರಯತ್ನ ಮಾಡಿರುವ ಚಿತ್ರತಂಡಕ್ಕೆ ಶುಭಾಶಯ ತಿಳಿಸಿದರು.


ಈ ಚಿತ್ರಕ್ಕೆ ಚಂದ್ರಶೇಖರ ಗೌಡ ಬಂಡವಾಳ ಹಾಕಿದ್ದು, ಇವರೊಂದಿಗೆ ಮನೋಜ್ ಬಿ ಜಿ. ಪ್ರಕಾಶ್ ಮದ್ದೂರು, ಅನಿಲ್ ಷಡಾಕ್ಷರಿ, ಗಿರೀಶ .ಕೆ – ಗೋವರ್ಧನ ಬಿ, ಅವಿನಾಶ್ ಗೌಡ ಈ ಚಿತ್ರದ ಸಹ ನಿರ್ಮಾಪಕರು.

RELATED ARTICLES

Most Popular

Share via
Copy link
Powered by Social Snap