ಗಾಳಿಪಟ – 2 ಸಕ್ಸಸ್ ನಲ್ಲಿರುವ ಗೋಲ್ಡನ್ ಸ್ಟಾರ್ ಈಗ ‘ತ್ರಿಬಲ್ ರೈಡಿಂಗ್ ‘ ಮಾಡೋಕೆ ರೆಡಿಯಾಗಿದ್ದಾರೆ. ಇತ್ತೀಚೆಗೆ ಹಾಡಿನ ಮೂಲಕ ತ್ರಿಬಲ್ ರೈಡಿಂಗ್ ನ್ನು ಆರಂಭಿಸಿದ್ದಾರೆ.
ಮಹೇಶ್ ಗೌಡ ನಿರ್ದೇಶನದ ‘ತ್ರಿಬಲ್ ರೈಡಿಂಗ್’ ಚಿತ್ರದ ‘ಯಟ್ಟಾ ಯಟ್ಟಾ’ ಹಾಡು ರಿಲೀಸ್ ಆಗಿ ಸಖತ್ ಸದ್ದು ಮಾಡುತ್ತಿದೆ. ಚಂದನ್ ಬರೆದಿರುವ ಈ ಹಾಡನ್ನು ಚಂದನ್ ಹಾಗೂ ಮಂಗ್ಲಿ ಒಟ್ಟಾಗಿ ಹಾಡಿದ್ದಾರೆ.
ಹಾಡಿನಲ್ಲಿ ಮೂವರು ನಾಯಕಿರೊಂದಿಗೆ ಗೋಲ್ಡನ್ ಸ್ಟಾರ್ ಭರ್ಜರಿ ಸ್ಟೆಪ್ ಹಾಕಿದ್ದಾರೆ.
ಹಾಡಿನ ಬಿಡುಗಡೆ ಸಮಾರಂಭದಲ್ಲಿ ಮಾತಾನಾಡಿದ ನಿರ್ದೇಶಕ ಮಹೇಶ್ ಗೌಡ,
ನಾನು “ಮುಂಗಾರು ಮಳೆ” ಸಮಯದಿಂದ ಗಣೇಶ್ ಅವರನ್ನು ಬಲ್ಲೆ. ಆಗಿನಿಂದಲೂ ನನಗೆ ಅವರಿಗೊಂದು ಸಿನಿಮಾ ಮಾಡುವ ಆಸೆ. ಕಾಲ ಈಗ ಕೂಡಿ ಬಂದಿದೆ. “ತ್ರಿಬಲ್ ರೈಡಿಂಗ್” ಸ್ವಮೇಕ್ ಚಿತ್ರ. ಆಕ್ಷನ್, ಥ್ರಿಲ್ಲರ್, ಕಾಮಿಡಿ, ಸ್ವಲ್ಪ ಸೆಂಟಿಮೆಂಟ್ ಹಾಗೂ ಸಸ್ಪೆನ್ಸ್ ಎಲ್ಲವೂ ಇದೆ. ನಾಲ್ಕು ಹಾಡುಗಳಿದೆ. ಆದರಲ್ಲಿ ಒಂದು ಹಾಡು ಇಂದು ಬಿಡುಗಡೆಯಾಗಿದೆ. ಇನ್ನೂ ಮೂರು ಹಾಡುಗಳು ಒಂದಕ್ಕಿಂತ ಒಂದು ಚೆನ್ನಾಗಿದೆ. ಸಾಯಿಕಾರ್ತಿಕ್ ಈ ಸಂಗೀತ ನಿರ್ದೇಶಕರು. ಇಂದು ಬಿಡುಗಡೆಯಾಗಿರುವ ಈ ಹಾಡನ್ನು ಚಂದನ್ ಶೆಟ್ಟಿ ಹಾಗೂ ಮಂಗ್ಲಿ ಸುಮಧುರವಾಗಿ ಹಾಡಿದ್ದಾರೆ. ಅಂದುಕೊಂಡ ಹಾಗೆ ಸಿನಿಮಾ
ಮಾಡಿದ್ದೇವೆ. ಅದಕ್ಕೆ ಕಾರಣರಾದ ನಿರ್ಮಾಪಕ ರಾಮ್ ಗೋಪಾಲ್ ಅವರಿಗೆ ಧನ್ಯವಾದ. ನಿಮ್ಮೆಲ್ಲರ ಹಾರೈಕೆಯಿರಲಿ ಎಂದರು.


ಚಿತ್ರದ ಬಗ್ಗೆ ಮಾತಾನಾಡಿದ ಗೋಲ್ಡನ್ ಸ್ಟಾರ್ ಗಣೇಶ್ ,ನಿರ್ದೇಶಕ ಮಹೇಶ್ ನನಗೆ “ಮುಂಗಾರು ಮಳೆ” ಯಿಂದ ಪರಿಚಯ. ಆ ಚಿತ್ರಕ್ಕೆ ಅವರು ನಿರ್ದೇಶನ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದರು. ಆಗಲೇ ನನಗೆ ಒಂದು ಕಥೆ ಮಾಡುತ್ತೀನಿ ಎಂದಿದ್ದರು. ಹದಿನಾಲ್ಕು ವರ್ಷಗಳ ನಂತರ ಕಥೆ ಮಾಡಿಕೊಂಡು ಬಂದರು. ಒಳ್ಳೆಯ ಪಾತ್ರ ಕೊಟ್ಟಿರುವುದಕ್ಕೆ ಧನ್ಯವಾದ. ಮೊದಲ ಬಾರಿ ನಿರ್ಮಾಣ ಮಾಡಿರುವ ರಾಮ್ ಗೋಪಾಲ್ ಅವರಿಗೆ ಒಳ್ಳೆಯದಾಗಲಿ. ಚಿತ್ರದ ಆರಂಭದಿಂದ ಕೊನೆಯವರೆಗೂ ಸಾಕಷ್ಟು ಟ್ವಿಸ್ಟು, ಟರ್ನ್ ಗಳಿರುತ್ತವೆ. ಇದೊಂದು ಪಕ್ಕಾ ಕಾಮಿಡಿ ಚಿತ್ರ. ಅದರಲ್ಲೂ ಚಿತ್ರದ ಕೊನೆಯ ಇಪ್ಪತ್ತು ನಿಮಿಷ ಪ್ರೇಕ್ಷಕರನ್ನು ನಗೆಗಡಲಲ್ಲಿ ತೇಲಿಸುತ್ತದೆ. “ತ್ರಿಬಲ್ ರೈಡಿಂಗ್” ಹೋದರೆ ಏನೆಲ್ಲಾ ತೊಂದರೆ ಆಗಬಹುದು ಎನ್ನುವುದನ್ನ ಇದರಲ್ಲಿ ನೋಡಬಹುದು. ಈ ಚಿತ್ರದಲ್ಲಿ ಮೂವರು ನಾಯಕಿಯರು. ಅದಿತಿ ಪ್ರಭುದೇವ, ಮೇಘ ಶೆಟ್ಟಿ ಹಾಗೂ ರಚನಾ ಇಂದರ್. ಎಲ್ಲರ ಅಭಿನಯ ತುಂಬಾ ಚೆನ್ನಾಗಿದೆ. ನೋಡಿ ಹರಸಿ ಎಂದರು.
ಚಿತ್ರದ ನಾಯಕಿ ಮೇಘ ಶೆಟ್ಟಿ ಮಾತಾನಾಡಿ,
ನನ್ನದು ಈ ಚಿತ್ರದಲ್ಲಿ ಡಾಕ್ಟರ್ ಪಾತ್ರ. ಗಣೇಶ್ ಸರ್ ಜೊತೆ ನನ್ನ ಮೊದಲ ಸಿನಿಮಾ. ಹಾಡು ಹಾಗೂ ಸಿನಿಮಾ ಎರಡು ಚೆನ್ನಾಗಿದೆ ಎಂದು ಹೇಳಿದರು.


ಮತ್ತೊಬ್ಬ ನಾಯಕಿ ರಚನಾ ಇಂದರ್ ಚಿತ್ರದ ಬಗ್ಗೆ ಮಾತಾನಾಡುತ್ತಾ,
“ಲವ್ ಮಾಕ್ಟೇಲ್” ನಂತರ ನಾನು ಒಪ್ಪಿಕೊಂಡ ಚಿತ್ರ ಇದು. ಹಠಮಾರಿ ಹೆಣ್ಣಿನ ಪಾತ್ರ ನನ್ನದು. ಏನಾದರೂ ಬೇಕೆಂದರೆ ಅದು ಬೇಕು ಎಂದು ಪಡೆದುಕೊಳ್ಳುತ್ತೇನೆ. ಒಳ್ಳೆಯ ಪಾತ್ರ ಕೊಟ್ಟ ನಿರ್ದೇಶಕರಿಗೆ ಧನ್ಯವಾದ ಎಂದರು.
ಗಾಯಕ, ನಟ ಚಂದನ್ ಅವರು,
ಗಣೇಶ್ ಸರ್ ಗೆ ಈ ಹಿಂದೆ ಎರಡು ಹಾಡು ಹಾಡಿದೆ. ಇದು ಮೂರನೇ ಹಾಡು. ಸಾಯಿಕಾರ್ತಿಕ್ ತುಂಬಾ ಚೆನ್ನಾಗಿ ಸಂಗೀತ ನೀಡಿದ್ದಾರೆ. ಹಾಡು ಹಾಗೂ ಸಿನಿಮಾ ಎರಡೂ ಹಿಟ್ ಆಗಲಿ ಶೆಟ್ಟಿ ಹಾರೈಸಿದರು.
ನಿರ್ಮಾಪಕ ರಾಮದ ಗೋಪಾಲ್ ವೈ.ಎಂ ಮಾತಾನಾಡಿ, ಇದು ನನ್ನ ಮೊದಲ ನಿರ್ಮಾಣದ ಚಿತ್ರ. ನಿಮ್ಮೆಲ್ಲರ ಪ್ರೋತ್ಸಾಹವಿರಲಿ ಎಂದರು.

